ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಿ-ಅಮೃತರಾವ ಚಿಮಕೋಡೆ
=================
ಬೀದರ, ಫೆಬ್ರವರಿ.05 (ಕರ್ನಾಟಕ ವಾರ್ತೆ):- ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಿಸುವಲ್ಲಿ ಯಾವುದೇ ವಿಳಂಭವಾಗಬಾರದು. ಪ್ರತಿ ಹಂತದಲ್ಲೂ ಅಧಿಕಾರಿಗಳು ಗಮನಿಸಿ ಅರ್ಹ ಫಲಾನುಭವಿಗಳಿಗೆ ಸಮರ್ಥಕವಾಗಿ ಹಾಗೂ ನಿಗಧಿತ ಸಮಯದಲ್ಲಿ ತಲುಪಿಸಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಸೂಚಿಸಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬೀದರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ 3,44,896 ಗೃಹಲಕ್ಷ್ಮೀ ಫಲಾನುಭವಿಗಳಿದ್ದು, ಮೃತ ಫಲಾನುಭವಿಗಳ ಕುರಿತು ಪ್ರತಿ ತಿಂಗಳು ನಿರಂತರ ಪರಿಷ್ಕøರಣೆ ಮಾಡಬೇಕು. ಅರ್ಹರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕೆಂದರು.
ಗೃಹಲಕ್ಷ್ಮೀ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಗುರುತಾಗಿದ್ದು, ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಗೆ ಬುನಾದಿಯಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಬಿ.ಪಿ.ಎಲ್. ಮತ್ತು ಎ.ಪಿ.ಎಲ್., ಅಂತ್ಯೋದಯ ಕಾರ್ಡನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000 ಗಳ ಸಹಾಯಧನ ನೀಡಲಾಗುತ್ತಿದೆ ಎಂದರು.
ಗೃಹಲಕ್ಷ್ಮೀ ಯೋಜನೆ ಒಟ್ಟು 3,44,896 ಫಲಾನುಭವಿಗಳಿದ್ದು, 1547.49 ಕೋಟಿ ರೂ. ಸೆಪ್ಟೆಂಬರ್.2025 ರವರೆಗೆ ಸಹಾಯಧನ ಡಿ.ಬಿ.ಟಿ. ಮೂಲಕ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 3,56,422 ಅರ್ಹ ಫಲಾನುಭವಿಗಳಿದ್ದು, ಡಿಸೆಂಬರ್.2025 ರವರೆಗೆ 462.46 ಕೋಟಿ ರೂ. ಸಬ್ಸಿಡಿ ನೀಡಲಾಗಿದೆ. ಶಕ್ತಿ ಯೋಜನೆಯಡಿ 28-01-2026 ರವರೆಗೆ 11.11 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, 327.66 ಕೋಟಿ ರೂ. ಸಂದಾಯವಾಗಿರುತ್ತದೆ. ಪ್ರತಿನಿತ್ಯ ಸರಾಸರಿ 1 ಲಕ್ಷ 16 ಸಾವಿರ ಮಹಿಳೆಯರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆಂದರು.
ಅನ್ನಭಾಗ್ಯ ಯೋಜನೆಯಡಿಯಲ್ಲಿ 1313305 ಫಲಾನುಭವಿಗಳಿದ್ದು, 5 ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ನೀಡಲಾಗುವ 5 ಕೆಜಿ ಅಕ್ಕಿ ಮೊತ್ತವನ್ನು ಡಿಸೆಂಬರ್.2024 ರವರೆಗೆ ಡಿ.ಬಿ.ಟಿ. ಮುಖಾಂತರ ನೇರವಾಗಿ ಫಲಾನುಭವಿಗಳ ಖಾತೆಗೆ 333.28 ಕೋಟಿ ಹಣ ಜಮೆ ಮಾಡಲಾಗಿದೆ. ಜನವರಿ.2025 ರ ಮಾಹೆಯ ಡಿಬಿಟಿ ಮೂಲಕ ವರ್ಗಾವಣೆ ಬಾಕಿ ಇರುತ್ತದೆ. ಫೆಬ್ರುವರಿ.2025 ರ ಮಾಹೆಯಿಂದ ಡಿ.ಬಿ.ಟಿ. ಬದಲಾಗಿ ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗಳಿಗೆ 05 ಕೆ.ಜಿ. ಹೆಚ್ಚುವರಿ ಅಕ್ಕಿ ಸೇರಿಸಿ ಒಟ್ಟು 10 ಕೆ.ಜಿ. ಅಕ್ಕಿ ಜೂನ್.2025 ರವರೆಗೆ ವಿತರಿಸಲಾಗಿದೆ. ನಂತರ ಜುಲೈ.2025ರ ಮಾಹೆಯಿಂದ ಆಹಾರಧಾನ್ಯದಲ್ಲಿ ಅಕ್ಕಿ ಜೊತೆ ಜೋಳ ಸೇರಿಸಿ ಒಟ್ಟು 10 ಕೆ.ಜಿ. ಆಹಾರಧಾನ್ಯವನ್ನು ಸೆಪ್ಟೆಂಬರ್.2025ರ ಮಾಹೆಯವರೆಗೆ ನೀಡಲಾಗಿರುತ್ತದೆ. ಅಕ್ಟೋಬರ್.2025ರ ಮಾಹೆಯಿಂದ ಒಟ್ಟು 10 ಕೆ.ಜಿ. ಅಕ್ಕಿಯನ್ನು ಮಾತ್ರ ವಿತರಣೆ ಮಾಡಲಾಗುತ್ತಿದೆಂದರು. ..... ..... .......
=================
ಬೀದರ, ಫೆಬ್ರವರಿ.05 (ಕರ್ನಾಟಕ ವಾರ್ತೆ):- ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಿಸುವಲ್ಲಿ ಯಾವುದೇ ವಿಳಂಭವಾಗಬಾರದು. ಪ್ರತಿ ಹಂತದಲ್ಲೂ ಅಧಿಕಾರಿಗಳು ಗಮನಿಸಿ ಅರ್ಹ ಫಲಾನುಭವಿಗಳಿಗೆ ಸಮರ್ಥಕವಾಗಿ ಹಾಗೂ ನಿಗಧಿತ ಸಮಯದಲ್ಲಿ ತಲುಪಿಸಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಸೂಚಿಸಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬೀದರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ 3,44,896 ಗೃಹಲಕ್ಷ್ಮೀ ಫಲಾನುಭವಿಗಳಿದ್ದು, ಮೃತ ಫಲಾನುಭವಿಗಳ ಕುರಿತು ಪ್ರತಿ ತಿಂಗಳು ನಿರಂತರ ಪರಿಷ್ಕøರಣೆ ಮಾಡಬೇಕು. ಅರ್ಹರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕೆಂದರು.
ಗೃಹಲಕ್ಷ್ಮೀ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಗುರುತಾಗಿದ್ದು, ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಗೆ ಬುನಾದಿಯಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಬಿ.ಪಿ.ಎಲ್. ಮತ್ತು ಎ.ಪಿ.ಎಲ್., ಅಂತ್ಯೋದಯ ಕಾರ್ಡನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000 ಗಳ ಸಹಾಯಧನ ನೀಡಲಾಗುತ್ತಿದೆ ಎಂದರು.
ಗೃಹಲಕ್ಷ್ಮೀ ಯೋಜನೆ ಒಟ್ಟು 3,44,896 ಫಲಾನುಭವಿಗಳಿದ್ದು, 1547.49 ಕೋಟಿ ರೂ. ಸೆಪ್ಟೆಂಬರ್.2025 ರವರೆಗೆ ಸಹಾಯಧನ ಡಿ.ಬಿ.ಟಿ. ಮೂಲಕ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 3,56,422 ಅರ್ಹ ಫಲಾನುಭವಿಗಳಿದ್ದು, ಡಿಸೆಂಬರ್.2025 ರವರೆಗೆ 462.46 ಕೋಟಿ ರೂ. ಸಬ್ಸಿಡಿ ನೀಡಲಾಗಿದೆ. ಶಕ್ತಿ ಯೋಜನೆಯಡಿ 28-01-2026 ರವರೆಗೆ 11.11 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, 327.66 ಕೋಟಿ ರೂ. ಸಂದಾಯವಾಗಿರುತ್ತದೆ. ಪ್ರತಿನಿತ್ಯ ಸರಾಸರಿ 1 ಲಕ್ಷ 16 ಸಾವಿರ ಮಹಿಳೆಯರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆಂದರು.
ಅನ್ನಭಾಗ್ಯ ಯೋಜನೆಯಡಿಯಲ್ಲಿ 1313305 ಫಲಾನುಭವಿಗಳಿದ್ದು, 5 ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ನೀಡಲಾಗುವ 5 ಕೆಜಿ ಅಕ್ಕಿ ಮೊತ್ತವನ್ನು ಡಿಸೆಂಬರ್.2024 ರವರೆಗೆ ಡಿ.ಬಿ.ಟಿ. ಮುಖಾಂತರ ನೇರವಾಗಿ ಫಲಾನುಭವಿಗಳ ಖಾತೆಗೆ 333.28 ಕೋಟಿ ಹಣ ಜಮೆ ಮಾಡಲಾಗಿದೆ. ಜನವರಿ.2025 ರ ಮಾಹೆಯ ಡಿಬಿಟಿ ಮೂಲಕ ವರ್ಗಾವಣೆ ಬಾಕಿ ಇರುತ್ತದೆ. ಫೆಬ್ರುವರಿ.2025 ರ ಮಾಹೆಯಿಂದ ಡಿ.ಬಿ.ಟಿ. ಬದಲಾಗಿ ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗಳಿಗೆ 05 ಕೆ.ಜಿ. ಹೆಚ್ಚುವರಿ ಅಕ್ಕಿ ಸೇರಿಸಿ ಒಟ್ಟು 10 ಕೆ.ಜಿ. ಅಕ್ಕಿ ಜೂನ್.2025 ರವರೆಗೆ ವಿತರಿಸಲಾಗಿದೆ. ನಂತರ ಜುಲೈ.2025ರ ಮಾಹೆಯಿಂದ ಆಹಾರಧಾನ್ಯದಲ್ಲಿ ಅಕ್ಕಿ ಜೊತೆ ಜೋಳ ಸೇರಿಸಿ ಒಟ್ಟು 10 ಕೆ.ಜಿ. ಆಹಾರಧಾನ್ಯವನ್ನು ಸೆಪ್ಟೆಂಬರ್.2025ರ ಮಾಹೆಯವರೆಗೆ ನೀಡಲಾಗಿರುತ್ತದೆ. ಅಕ್ಟೋಬರ್.2025ರ ಮಾಹೆಯಿಂದ ಒಟ್ಟು 10 ಕೆ.ಜಿ. ಅಕ್ಕಿಯನ್ನು ಮಾತ್ರ ವಿತರಣೆ ಮಾಡಲಾಗುತ್ತಿದೆಂದರು. ..... ..... .......
Sponsored / Featured Ads
Contact for ADS
8748888103/100
Sponsored by People of Universe